Friday 29 January, 2010

ಚಿಗುರಿತು ಬೆಳಕು

ನೀರ ಕೊಯ್ದರು ಗಾಳಿಯ ಸೀಳಿದರು

ತೊಗಟೆಯ ಬಿರುಕುಗಳ

ಮಯ್ಯ ಮೇಲೆ ಎಳೆದುಕೊಂಡರು
ಭುವಿಯೆಲ್ಲ ಗೆರೆಗಳು

ತಿರುಗುತ್ತಿಲ್ಲ ಹುಟ್ಟು ಸಾವುಗಳನು ಹೊತ್ತು

ಭಾರವಾದ ಉಸಿರು

ಇನ್ನೇನು ಮುಗಿದೇ ಹೋಯಿತೆನ್ನುವಷ್ಟರಲ್ಲಿ

ಕಣ್ಣುಗಳಲ್ಲೇ ಇಡೀ ಬೆಳಕನ್ನು ತುಂಬಿಕೊಂಡು

ನನ್ನೆಡೆಗೆ ನೋಡಿದ ಹೊಳಪು

ಹೇಗೋ ನೆರಳುಗಳ ಸೀಳಿಕೊಂಡು

ನನ್ನಲ್ಲೆಲ್ಲ ಪ್ರವಹಿಸಿ

ಪುಳಕ, ತೆನೆ ತೂಗಿದಂತೆ ಹಗುರ

ಚಲನೆ ಶುರುವಾಯಿತು

ನೆಲಬೇರುಗಳಿಗೆ ಮತ್ತೆ ಚಿಗುರು.

                                       (ಮಂಜುನಾಥ.ಎಸ್)

No comments: