Saturday, 28 August 2010

ಭುವಿಯ ಒಡಲ ಕೂಗು

ಜಗವೆಲ್ಲ ತುಂಬಿಹುವುದು

ನಡೆಸುವ ನಾವಿಕನಿಲ್ಲ

ಓಡುತಿವುದು ಬಂಡಿ 

ಚಿದ್ರಗೊಂಡ ರಭಸಕೆ.

ನೀ ಕರುಣಿಸಿದ ಜನರೆ

ಅಗೆ ಅಗೆದು 

ಬಗೆ ಬಗೆದು

ನಿನ್ನೊಡಲ ಕಣ ಕಣವನು 

ಕಿತ್ತು ತಿನ್ನುತಿಹರು

ನಿಂತು ಬಿಡು ಒಮ್ಮೆ

ನಶಿಸಿ ಹೋಗಲಿ ಮನುಕುಲವೆಲ್ಲ

ಅಲ್ಲಿ, 
ಕಾಡು ಮೇಡುಗಳು ಉಗಮಿಸಲಿ 

ದಾರಿ ದಾರಿಯೆ ಕಣ್ಮರೆಯಾಗಲಿ

ಅವನಳಿಸಿದ ಪ್ರಾಣಿ ಪಕ್ಷಿ ಸಂಕುಲಗಳೆಲ್ಲ 

ಮರು ಹುಟ್ಟಿ ಸಂಭ್ರಮಿಸಲಿ.

Tuesday, 17 August 2010

ಮಮತೆಯ ಮರೆತವರು

ಈ ಭೂಮಿಯು ಹೆಣ್ಣು 

ಈ ಜಲವು ಹೆಣ್ಣು 

ನೀನೂ ಹೆಣ್ಣು, 

ನಿನ್ನ ಕುಡಿಯು ಹೆಣ್ಣೆಂದು 

ಎದೆಯ ಹಾಲಲಿ 

ಕತ್ತಿ ಮಸೆಯುತ್ತಿರುವೆ

ಇದು ಹೆಣ್ಣಿನ ಭಲಾಢ್ಯದ 

ಸಂಕೇತವೋ

ಗಂಡಿನ ವ್ಯವಸ್ಥಿತ ಪಿತೂರಿಯೆ ?

Saturday, 7 August 2010

ದುಗುಡದ ಮನ

ಜೋಡಿ ಎತ್ತುಗಳು 
ದುರುಗುಟ್ಟಿ ನೋಡುತಿವೆ
ನಾ ಹೇಗೆ ತಿಳಿಯಲಿ 
ಅವು ನನ್ನ ತಿವಿಯುವುದಿಲ್ಲವೆಂದು ?


ಜೋಡಿ ಹಕ್ಕಿಗಳೆರಡು
ಗೂಡು ಬಿಟ್ಟು ಹಾರುತಿವೆ 
ನಾ ಹೇಗೆ ತಿಳಿಯಲಿ 
ಅವು ಮತ್ತೆ ಗೂಡು ಸೇರುತ್ತೇವೆಂದು ? 



ಕಾಣದ ಕೈಗಳೆರಡು
ಕತ್ತು ಹಿಸುಕುತ್ತಿವೆ 
ನಾ ಹೇಗೆ ತಿಳಿಯಲಿ 
ನಾ ಮತ್ತೆ ಬದುಕುತ್ತೇನೆಂದು ? 

ದುಗುಡದ ಮನವೆ ದೂರವಾಗು ನನ್ನಿಂದ 
ದೃಡನಾಗುವೆ ನಾ ಮಸಣದಲ್ಲೂ............

Saturday, 31 July 2010

ಕೆಂಪು ಕುಂಚ

ನಿನ್ನ ದ್ಯೇಯಗಳ ನಿರ್ಣಯ

ಪರರ ಏಳಿಗೆಗೆ ಮೀಸಲಿರಿಸಿದೆ.

ಸರ್ವಧರ್ಮ

ಸಮಾಭಾವವೆಂದು ತಿಳಿದು

ನ್ಯಾಯ ವಿಚಾರ,

ಅಭಿವ್ಯಕ್ತಿ ನಂಬಿಕೆ ಇಟ್ಟು

ಊಟ, ಉಡುಪು, ಆಚಾರ,

ಭಾಷೆಗಳನ್ನು ಮೈಗೂಡಿಸಿಕೊಂಡು

ದೇಶವನು ಸುಭದ್ರಗೊಳಿಸಲೊರಡುವ

ಸಮಯಕೆ

ದೊರೆಯ ದಬ್ಬಾಳಿಕೆಗೆ ಸಿಲುಕಿ ಸೊರಗಿದೆ

ಹಸಿದು ಒಣಗಿದ ಜನರು ಕಾಯುತಿಹರು

ಏಳು, ಎದ್ದೇಳು

ನಿನ್ನ ಲೇಖನಿಯಲಿ ಶಿರವ ಚಂಡಾದಿ

ಹೋರಾಟದ ಹಾದಿಗೆ ಮುನ್ನುಡಿಯಿಡು.

Saturday, 24 July 2010

ತಣಿಸು ಜೀವಾತ್ಮವ


ಒಡಕು 
ಸನಿಹವಾದಾಗ 
ಮಾತು 
ಹೊರಹೊಮ್ಮಿ 
ಮನ್ನಿಸು ಎನ್ನುವಷ್ಟರಲ್ಲಿ 
ನನಗಾದ ನೋವು 
ನಿನ್ನದಲ್ಲವೆನ್ನುತ 
ಮರು ಮಾತಾಡದೆ 
ಬಾನಾಡಿಗಳ ದಣಿವಿನ ದಾಹವ ತೀರಿಸಿ 
ಮರೆಯಾದಳು